ಚೆನ್ನೈ ದಿಂದ ಬೆಂಗಳೂರಿಗೆ ಪಯಣಿಸುವಾಗ, ಜೋಲಾರಪೇಟೆ ನಿಲ್ದಾಣ ದಾಟಿದ ಮೇಲೆ ಕಾಣಸಿಗುವ ದೂರದ ಬೆಟ್ಟಗಳ
ತುದಿಯಲ್ಲಿದ್ದ ಬಿಳಿಕಲ್ಲಿನ ಬಂಡೆಗಳು, ಶಿಖರಕ್ಕೆ ಮುಸುಕಿದ ಹಿಮದಂತೆ ಕಂಡವು. ಆ ದೃಶ್ಯ ಕಂಡಾಗ ಮನಸ್ಸಿಗೆ
ಹೊಳೆದ ಸಾಲುಗಳು
ತುದಿಯಲ್ಲಿದ್ದ ಬಿಳಿಕಲ್ಲಿನ ಬಂಡೆಗಳು, ಶಿಖರಕ್ಕೆ ಮುಸುಕಿದ ಹಿಮದಂತೆ ಕಂಡವು. ಆ ದೃಶ್ಯ ಕಂಡಾಗ ಮನಸ್ಸಿಗೆ
ಹೊಳೆದ ಸಾಲುಗಳು
ಹೊಳೆವುದೆಲ್ಲ ಬಂಗಾರವಲ್ಲ,
ಬೆಳ್ಳಗಿರುವುದೆಲ್ಲ ಹಾಲಲ್ಲ,
ದೂರ ಬೆಟ್ಟದ ಮೇಗಡೆ
ಬಿಳಿ ಮುಸುಕು ಕಂಡೊಡೆ
ಮುಸುಕು ಹಿಮವಾಗದು
ಬೆಳ್ಳಗಿರುವುದೆಲ್ಲ ಹಾಲಲ್ಲ,
ದೂರ ಬೆಟ್ಟದ ಮೇಗಡೆ
ಬಿಳಿ ಮುಸುಕು ಕಂಡೊಡೆ
ಮುಸುಕು ಹಿಮವಾಗದು
ಬೆಟ್ಟ ಹಿಮಾಲಯವಾಗದೋ
ಮರುಳೇಶ್ವರಾ
ಹಚ್ಚ ಹಸಿರಿನ ನಡುವೆ
ಅಚ್ಚ ಬಿಳಿ ಹೂ ಚುಕ್ಕೆ,
ಕಾರಿರುಳ ಆಗಸದಿ
ಚಿಕ್ಕೆಗಳ ಚುಕ್ಕೆ
ಒಮ್ಮೊಮ್ಮೆ ಕಂಡಾಗ
ಒಂದೊಂದು ಹೊಸಪರಿ
ಬಣ್ಣಿಸಬಯಸಿ ಸೋತೆ