Tuesday, 5 February 2019

ಕಲಿಯುಗಕೆ ಸಿಲುಕಿಹ ಭಜರಂಗಬಲಿ

ಅಂಜನಿಯ ಸುತ ಆಂಜನೇಯ,
ಪಿಡಿದು ವಜ್ರಾಯುಧದಿ ಬಡಿದರೂ
ದವಡೆಮಾತ್ರ ಬಲಿಕೊಟ್ಟು,
ಹನೂಮಂತನಾಗುಳಿದೆ


ತ್ರೇತೆಯಲ್ಲಿ  ರಾಮಭಂಟ
ಸಾಗರವ ದಾಟಲೆರಗಿ
ಸುರಸೆ ನುಂಗಬಯಸಿದಾಗ
ಸರಸದಿಂದ  ಬಾಯಹೊಕ್ಕು
ವಿರಸವಿಲ್ಲದೆ ಹೊರಬಂದೆ !


ದ್ವಾಪರದಿ ದುರ್ಯೋಧನ
ಬೆಂಕಿಯಿಟ್ಟರೂ ಬದುಕುಳಿದು
ಗದೆಯೆದುರಿಸಿ,ಸದೆಬಡಿದು
ಬಲಭೀಮನೆನಿಸಿಕೊಂಡೆ


ಭಜರಂಗಬಲಿ ಎನಿಸಿ  
ಕಲಿಗಾಲದಿ ನಲಿದವನು
‘ದಲಿತ’ ನಾದ ಮರುಕ್ಷಣವೇ
‘ಆಲಿ’ ಯಾಗಿ ಹೋದೆಯಲ್ಲಾ !

ಕಲಿಯುಗದ ಕಲಿಗಳಿಗೆ   
ಸಿಲುಕಿಹೆ ಹನುಮಾ,
ಬಲಿಯಾಗುವೆ ಹುಲುಮನುಜರಿಗೆ !
ಕಾಲಪಿಡಿದ ಎನ್ನ
ಕಾಳಜಿಬಿಟ್ಟು, ನಿನ್ನ
ಬಾಲಉಳಿಸಿಕೊಳೋ ಜೀವೋತ್ತಮಾ !




No comments:

Post a Comment

ಬಹುಮಹಡಿಯ ಮುಂಜಾನೆ

ನನ್ನ ಪುತ್ರ ವಾಸಿಸುವ ಬಹುಮಹಡಿ ಕಟ್ಟಡದ ಸುತ್ತ ಮುತ್ತ ಇಂದು ಮುಂಜಾನೆ ನಡೆದಾಡುವಾಗ ಕಂಡ ಚಿತ್ರಗಳು, ಅದರಿಂದ ಪ್ರೇರಿತವಾಗಿ ಹೊರಬಿದ್ದ ಪದಗಳು.  ಬೆಳಗಿನ ಮೊದಲ ಮೆಟ್ರೋ  ...