ಪಿಡಿದು ವಜ್ರಾಯುಧದಿ ಬಡಿದರೂ
ದವಡೆಮಾತ್ರ ಬಲಿಕೊಟ್ಟು,
ಹನೂಮಂತನಾಗುಳಿದೆ
ತ್ರೇತೆಯಲ್ಲಿ ರಾಮಭಂಟ
ಸಾಗರವ ದಾಟಲೆರಗಿ
ಸುರಸೆ ನುಂಗಬಯಸಿದಾಗ
ಸರಸದಿಂದ ಬಾಯಹೊಕ್ಕು
ವಿರಸವಿಲ್ಲದೆ ಹೊರಬಂದೆ !
ದ್ವಾಪರದಿ ದುರ್ಯೋಧನ
ಬೆಂಕಿಯಿಟ್ಟರೂ ಬದುಕುಳಿದು
ಗದೆಯೆದುರಿಸಿ,ಸದೆಬಡಿದು
ಬಲಭೀಮನೆನಿಸಿಕೊಂಡೆ
ಭಜರಂಗಬಲಿ ಎನಿಸಿ
ಕಲಿಗಾಲದಿ ನಲಿದವನು
‘ದಲಿತ’ ನಾದ ಮರುಕ್ಷಣವೇ
‘ಆಲಿ’ ಯಾಗಿ ಹೋದೆಯಲ್ಲಾ !
ಕಲಿಯುಗದ ಕಲಿಗಳಿಗೆ
ಸಿಲುಕಿಹೆ ಹನುಮಾ,
ಬಲಿಯಾಗುವೆ ಹುಲುಮನುಜರಿಗೆ !
ಕಾಲಪಿಡಿದ ಎನ್ನ
ಕಾಳಜಿಬಿಟ್ಟು, ನಿನ್ನ
ಬಾಲಉಳಿಸಿಕೊಳೋ ಜೀವೋತ್ತಮಾ !
No comments:
Post a Comment