Wednesday, 9 February 2022

ಶ್ರೀಮದಾನಂದತೀರ್ಥರ ಶ್ರೀಮಚ್ಚರಣಗಳಲ್ಲಿ

ಶ್ರೀ ಮಧ್ವಾಂತರ್ಗತ ಶ್ರೀ ಲಕ್ಷ್ಮಿನಾರಾಯಣರ ಪ್ರೇರಣೆಯಿಂದ, ಅವರ ಸೇವೆಯೆಂದು,

ಇಂದು ಮಧ್ವನವಮಿಯ ಶುಭ ಸಂಧರ್ಭದಲ್ಲಿ  ಶ್ರೀಮದಾನಂದತೀರ್ಥರ 

ಶ್ರೀಮಚ್ಚರಣಗಳಲ್ಲಿ ಸಮರ್ಪಣೆ 


ತ್ರೇತೆಯಲಿ ಹನುಮ ನೀ ಶ್ರೀರಾಮನ ಬಂಟ 

ದ್ವಾಪರದಲಿ ಭೀಮ, ನಮ್ಮ ಕೃಷ್ಣನ ನೆಂಟ 

ಕಲಿಯುಗದಿ ಅವತರಿಸಿ ಮಧ್ವರಾಯನೆಂದು 

ಉಡುಪಿಯಲಿ ನಿಲ್ಲಿಸಿದೆ ಕೃಷ್ಣನೆಳೆತಂದು !


ಪಾಕಶಾಸ್ತ್ರ ಪ್ರವೀಣ ದ್ವಾಪರದ ಭೀಮ 

ಶಾಸ್ತ್ರಪಾಕವಿಳಿಸಿದನಮ್ಮ ಮಧ್ವ ಮಹಿಮ 

ನೀ ಬರೆದ ಭಾಷ್ಯ, ತಾತ್ಪರ್ಯ, ಸಾರ 

ಹರಿಭಕ್ತಿ, ತಾರತಮ್ಯ, ಬೇಧ ನಮಗಾಧಾರ 


ತಂದೆ ನೀ, ತಾಯಿ ನೀ, ಗುರು ಭಾತೃ ನೀನು 

ಪ್ರಾಣ, ನೀನಿರುವವರೆಗೆ ಆಡುವೆನು ನಾನು 

ಕೃಪೆಮಾಡು ಹರಿಯಲ್ಲಿ, ನಿನ್ನಲ್ಲಿ, ಭಕ್ತಿ 

ನಿನ್ನ ಪಾದಧೂಳಿಯಿಂದಲೇ ನಮಗೆ ಮುಕ್ತಿ.   


ಶಾಸ್ತ್ರ ಪ್ರಕಾರವರಿಯೆ ಪಾಮರನು ನಾನು 

ಸಂಸಾರ ಕೂಪದೊಳು ಈಜುತಿಹ ಮೀನು 

ನನ್ನ ಮನ, ಒಳ ಹೊರಗ, ತಿಳಿದಿಹನು ನೀನು 

ಸ್ವಾಮಿ, ನೀ ಸತತ ಪೊರೆ ಈ ರಘುನಂದನನು 


  ‘ಪಕ್ಷಪಾತಿ ಸೂರ್ಯ’  ಅಲ್ಲಿಯೂ ಇದೇ ಸೂರ್ಯನೇ.  ಇಲ್ಲಿ ಮೂಡುವಂತೆಯೇ ಅಲ್ಲಿಯೂ  ಮೂಡುತ್ತಾನೆ, ಮುಂಜಾನೆ, ನಮ್ಮೂರಿನಲ್ಲಿ   ಇಲ್ಲಿ  ಸುಂದರವಾದ ಸಾಲು ಮನೆಗಳ ನಡುವೆ    ...